News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

1686

ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಹಿಂದೆ ಇದೆ ಅನೇಕ ಪೌರಾಣಿಕ ಕಥೆಗಳು:-

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

 

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.


ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..

ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.

ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಒಳ್ಳೆಯದರ ಗೆಲುವು ದೀಪಾವಳಿ:-

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಪಟಾಕಿ ಹೊಡೆಯುವವರಿಗೆ ಕೆಲವು ಸಲಹೆಗಳು:-

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.

ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.

– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.

– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.

-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.

-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.

-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.