News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

1696

ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಹಿಂದೆ ಇದೆ ಅನೇಕ ಪೌರಾಣಿಕ ಕಥೆಗಳು:-

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

 

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.


ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..

ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.

ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಒಳ್ಳೆಯದರ ಗೆಲುವು ದೀಪಾವಳಿ:-

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಪಟಾಕಿ ಹೊಡೆಯುವವರಿಗೆ ಕೆಲವು ಸಲಹೆಗಳು:-

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.

ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.

– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.

– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.

-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.

-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.

-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…