ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…