ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಹೌದು.ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದ ಒಂದು ಮದುವೆಯಲ್ಲಿ, ವರ ನಾಗಿಣಿ ಡ್ಯಾನ್ಸ್ ಮಾಡಿದ್ದರಿಂದ ವಧು ಮದುವೆಯನ್ನೇ ತಿರಸ್ಕರಿಸಿದ್ದಾಳೆ.
ಉತ್ತರಪ್ರದೇಶದ ಶಹಜಹಾನ್ಪುರದ ಪ್ರಿಯಾಂಕಾ ತ್ರಿಪಾಠಿ ಮತ್ತು ಅನುಭವ್ ಮಿಶ್ರಾ ಅವರ ಮದುವೆಯನ್ನು ಕುಟುಂಬಸ್ಥರು ನಿಗದಿ ಮಾಡಿದ್ದರು. ಎಲ್ಲಾ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರನು ಕುಡಿದ ಸ್ಥಿತಿಯಲ್ಲಿ, ನಾಗಿಣಿ ಡ್ಯಾನ್ಸ್ ಮಾಡಿ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾನೆ.
ವರ ಅನುಭವ್ ಮಿಶ್ರಾ ಮಾಡಿದ ನಾಗಿಣಿ ಡ್ಯಾನ್ಸ್ ನಿಂದ ಮುಜುಗರವಾದ ಕಾರಣ, ಇನ್ನೇನು ಮದುವೆಯ ಶಾಸ್ತ್ರಗಳು ಆರಂಭವಾಗಬೇಕಿದ್ದ ಕೆಲವೇ ಸಮಯದ ಮುಂಚೆ ವಧು ಮದುವೆ ನಿರಾಕರಿಸಿದ್ದಾಳೆ.
ವರನ ಸಂಬಂಧಿಕರು ಹಾಗೂ ಸ್ನೇಹಿತರು ವಧು ಪ್ರಿಯಾಂಕಾಳ ಮನವೊಲಿಸಲು ಪ್ರಯತ್ನಿಸಿದರಾದ್ರೂ ಆಕೆ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ವಧುವಿನ ತಂದೆಯೂ ಕೂಡ ಮಗಳ ನಿರ್ಧಾರವನ್ನು ಬೆಂಬಲಿಸಿದ್ದಾರೆ. ವರ ಮಾಡಿದ ಕೆಲಸದಿಂದ ನಿಜಕ್ಕೂ ಮುಜುಗರ ಅನುಭವಿಸಬೇಕಾಯ್ತು. ಆದ್ದರಿಂದ ನಾನು ನನ್ನ ಮಗಳ ಪರ ನಿಲ್ಲಬೇಕಾಯ್ತು ಎಂದು ಅವರು ಹೇಳಿದ್ದಾರೆ.
ಕೊನೆಗೆ ಪ್ರಿಯಾಂಕಾ ಮರುದಿನವೇ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…