ಕರ್ನಾಟಕದ ಸಾಧಕರು

ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

6341

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.

ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ…

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್‌ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್‌ನ ಹೀತ್ರೂ ಇಂಟರ್‌ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸುಧಾಮೂರ್ತಿಯವರ ಸರಳ ಉಡುಗೆ…

ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.

ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಸುಧಾಮೂರ್ತಿಗೆ ಆ ಮಹಿಳೆ ಹಿಯಾಳಿಸಿದ್ದು ಹೇಗೆ..?

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.

ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್‌ ನಿರ್ವಹಿಸಿದ್ದು ಏರ್‌ಪೋರ್ಟ್‌ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.

ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!

ಸುಧಾಮೂರ್ತಿ ಕೊಟ್ಟ ಕೌಂಟರ್‌ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಇಂತಹ ಸರಳತೆಯ ಸುಧಾಮೂರ್ತಿಯವರ ಬಗ್ಗೆ ಒಂದು ಕಿರು ಪರಿಚಯ…

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಸುಧಾಮುರ್ತಿಯವರು ಪಡೆದಿರುವ ಪ್ರಶಸ್ತಿಗಳು…

  • ಬಿ.ಇ.(ಇಲೆಕ್ಟ್ರಿಕಲ್ ಇಂಜನಿಯರಿಂಗ್ ಪರೀಕ್ಷೆ) ಯಲ್ಲಿ ಪ್ರಥಮ ಸ್ಥಾನ ಲಭಿಸಿದಾಗ ಕರ್ನಾಟಕದ ಮುಖ್ಯ ಮಂತ್ರಿಗಳಿಂದ ಬೆಳ್ಳಿಯ ಪದಕ ಲಭಿಸಿತ್ತು.
  • ಎಮ್.ಟೆಕ್. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ದೊರೆತಾಗ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ದಿಂದ ಬಂಗಾರದ ಪದಕ ದೊರೆತಿತ್ತು.
  • 1995ರಲ್ಲಿ ಬೆಂಗಳೂರಿನ ರೋಟರಿ ಕ್ಲಬ್ ನಿಂದ ಬೆಸ್ಟ್ ಟೀಚರ್ ಪುರಸ್ಕಾರ ದೊರೆತಿದೆ.
  • ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾದವರಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
  • ಸಮಾಜಸೇವೆಗಾಗಿ ಹುಬ್ಬಳ್ಳಿ ದಕ್ಷಿಣ ಭಾಗದ ರೋಟರಿ ಕ್ಲಬ್ ನಿಂದ ಪುರಸ್ಕಾರ ದೊರೆತಿದೆ.
  • 2000 ನೆಯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.
  • ಸಮಾಜಸೇವೆಗಾಗಿ 2000 ಸಾಲಿನ ಓಜಸ್ವಿನಿ ಪ್ರಶಸ್ತಿ ದೊರೆತಿದೆ.
  • ಮಿಲೆನಿಯಮ್ ಮಹಿಳಾ ಶಿರೋಮಣಿಪ್ರಶಸ್ತಿ ಲಭಿಸಿದೆ.
  • ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜನಿಯರಿಂಗ್‌ ಪ್ರತಿಷ್ಠಾನ ಪ್ರಶಸ್ತಿ (2001),
  • “ಶಾಲೆ ಮಕ್ಕಳಿಗಾಗಿ ಕಂಪ್ಯೂಟರ್” ಈ ಕೃತಿಗೆ ಅತ್ತಿಮಬ್ಬೆ ಪ್ರಶಸ್ತಿ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…