ಆರೋಗ್ಯ

ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

211

ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.

ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.

ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.

ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-

  • ನಮ್ಮ ತ್ವಚೆ ಉತ್ತಮವಾಗಿರಲು,
  • ಚರ್ಮದಡಿ ಸಂಗ್ರಹವಾಗಿರುವ ವಿಷಕಾರಿ ವಸ್ತುಗಳನ್ನು ಮತ್ತು ಸೋಂಕುಕಾರಕ ಕಣಗಳನ್ನು ನಿವಾರಿಸಲೂ ನೀರುಬೇಕು.
  • ವಿಶೇಷವಾಗಿ ಜೀವರಾಸಾಯನಿಕ ಪ್ರಕ್ರಿಯೆ ಉತ್ತಮವಾಗಿ ನಡೆಯಲು,
  • ತಿಂದ ಆಹಾರವನ್ನು ಪಚನಗೊಳಿಸಲು,
  • ಶಕ್ತಿವೃದ್ಧಿಸಲು,
  • ಏಕಾಗ್ರತೆ ಪ‌ಡೆಯಲು ನೀರು ಅತ್ಯಗತ್ಯ.

ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪ‌ಡಿಸಿಕೊಂಡು ಕುಡಿಯುವುದು ಒಳ್ಳೆಯದು.

ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.

ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್‌ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.

ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.

ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.

ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.

ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.

ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…