ಆರೋಗ್ಯ

ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

187

ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.

ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.

ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.

ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-

  • ನಮ್ಮ ತ್ವಚೆ ಉತ್ತಮವಾಗಿರಲು,
  • ಚರ್ಮದಡಿ ಸಂಗ್ರಹವಾಗಿರುವ ವಿಷಕಾರಿ ವಸ್ತುಗಳನ್ನು ಮತ್ತು ಸೋಂಕುಕಾರಕ ಕಣಗಳನ್ನು ನಿವಾರಿಸಲೂ ನೀರುಬೇಕು.
  • ವಿಶೇಷವಾಗಿ ಜೀವರಾಸಾಯನಿಕ ಪ್ರಕ್ರಿಯೆ ಉತ್ತಮವಾಗಿ ನಡೆಯಲು,
  • ತಿಂದ ಆಹಾರವನ್ನು ಪಚನಗೊಳಿಸಲು,
  • ಶಕ್ತಿವೃದ್ಧಿಸಲು,
  • ಏಕಾಗ್ರತೆ ಪ‌ಡೆಯಲು ನೀರು ಅತ್ಯಗತ್ಯ.

ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪ‌ಡಿಸಿಕೊಂಡು ಕುಡಿಯುವುದು ಒಳ್ಳೆಯದು.

ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.

ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್‌ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.

ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.

ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.

ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.

ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.

ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…