ಆರೋಗ್ಯ

ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

2696

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

  • ಕೂದಲಿನ ಬುಡಕ್ಕೆ ನಿಂಬೆರಸವನ್ನು ತಿಕ್ಕಿ ಹತ್ತು ನಿಮಿಷ ಬಿಟ್ಟು ಸ್ನಾನ ಮಾಡಿದರೆ ತಲೆಯ ಹೊಟ್ಟು ಕಡಿಮೆಯಾಗುತ್ತದೆ.
  • ಜ್ವರದಿಂದ ಬಳಲಿಕೆ ಉಂಟಾದಾಗ ನಿಂಬೆರಸವನ್ನು ಸೇವಿಸಿದರೆ ಬಳಲಿಕೆ ಕಡಿಮೆಯಾಗುತ್ತದೆ.
  • ಸ್ವಲ್ಪ ಕಡಲೆಹಿಟ್ಟಿಗೆ  ಜೇನುತ್ತುಪ್ಪ ಮತ್ತು ನಿಂಬೆರಸ ಸೇರಿಸಿ ಕಲೆಸಿ ಮುಖಕ್ಕೆ ಲೇಪಿಸಿ 1 ಘಂಟೆಯ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು ಇದರ ಉಪಯೋಗದಿಂದ ಮುಖದ ಜಿಡ್ಡು ,ಕೊಳೆ ಹೋಗಿ ಮುಖದ ಕಾಂತಿ ಹೆಚ್ಚುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-

*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.

*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.

*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.

*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.

*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ  ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.

*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.

*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.

*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.

*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…