ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್ ತುಂಬಾ ಪ್ರಬುದ್ಧ ನಟ.. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.