News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಹಣ ಕಾಸು

ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

928

ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.

1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)

ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.

2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)

ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.

3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)

ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.

4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.

ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.

5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ

ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.

6. ಫಿಕ್ಸೆಡ್ ಡಿಪೋಸಿಟ್

ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.

7. ಇನ್ಸುರೆನ್ಸೆ  ಪ್ರೀಮಿಯಂ ಪೇಮೆಂಟ್

ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.

8. ಆದಾಯ ತೆರಿಗೆ ಪಾವತಿಸಿ

ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.

9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ

ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ

ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.

11. ಖಾತೆ ವರ್ಗಾವಣೆ ಮಾಡಬಹುದು.

ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು.  ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.

12.ಮೊಬೈಲ್ ಬ್ಯಾಂಕಿಂಗ್ ನೋಂದಣಿ

ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.

13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ

ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.

14. ರೈಲ್ವೆ  ಟಿಕೆಟ್  ಬುಕಿಂಗ್ ಮಾಡಿ

ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.

15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು

ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…

  • ಉಪಯುಕ್ತ ಮಾಹಿತಿ

    ನಿಮ್ಮ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು..?ಯಾರೆಲ್ಲ ರಕ್ತದಾನ ಮಾಡಬಹುದು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ