ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.
1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)
ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.
2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)
ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.
3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)
ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.
4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.
ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.
5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ
ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.
6. ಫಿಕ್ಸೆಡ್ ಡಿಪೋಸಿಟ್
ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.
7. ಇನ್ಸುರೆನ್ಸೆ ಪ್ರೀಮಿಯಂ ಪೇಮೆಂಟ್
ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.
8. ಆದಾಯ ತೆರಿಗೆ ಪಾವತಿಸಿ
ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.
9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ
ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ
ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.
11. ಖಾತೆ ವರ್ಗಾವಣೆ ಮಾಡಬಹುದು.
ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು. ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.
12.ಮೊಬೈಲ್ ಬ್ಯಾಂಕಿಂಗ್ ನೋಂದಣಿ
ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.
13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ
ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.
14. ರೈಲ್ವೆ ಟಿಕೆಟ್ ಬುಕಿಂಗ್ ಮಾಡಿ
ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.
15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು
ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…