ಹಣ ಕಾಸು

ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

920

ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.

1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)

ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.

2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)

ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.

3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)

ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.

4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.

ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.

5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ

ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.

6. ಫಿಕ್ಸೆಡ್ ಡಿಪೋಸಿಟ್

ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.

7. ಇನ್ಸುರೆನ್ಸೆ  ಪ್ರೀಮಿಯಂ ಪೇಮೆಂಟ್

ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.

8. ಆದಾಯ ತೆರಿಗೆ ಪಾವತಿಸಿ

ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.

9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ

ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ

ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.

11. ಖಾತೆ ವರ್ಗಾವಣೆ ಮಾಡಬಹುದು.

ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು.  ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.

12.ಮೊಬೈಲ್ ಬ್ಯಾಂಕಿಂಗ್ ನೋಂದಣಿ

ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.

13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ

ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.

14. ರೈಲ್ವೆ  ಟಿಕೆಟ್  ಬುಕಿಂಗ್ ಮಾಡಿ

ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.

15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು

ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…