ಹಣ ಕಾಸು

ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

924

ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.

1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)

ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.

2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)

ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.

3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)

ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.

4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.

ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.

5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ

ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.

6. ಫಿಕ್ಸೆಡ್ ಡಿಪೋಸಿಟ್

ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.

7. ಇನ್ಸುರೆನ್ಸೆ  ಪ್ರೀಮಿಯಂ ಪೇಮೆಂಟ್

ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.

8. ಆದಾಯ ತೆರಿಗೆ ಪಾವತಿಸಿ

ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.

9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ

ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ

ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.

11. ಖಾತೆ ವರ್ಗಾವಣೆ ಮಾಡಬಹುದು.

ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು.  ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.

12.ಮೊಬೈಲ್ ಬ್ಯಾಂಕಿಂಗ್ ನೋಂದಣಿ

ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.

13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ

ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.

14. ರೈಲ್ವೆ  ಟಿಕೆಟ್  ಬುಕಿಂಗ್ ಮಾಡಿ

ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.

15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು

ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…