ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.
1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)
ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.
2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)
ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.
3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)
ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.
4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.
ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.
5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ
ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.
6. ಫಿಕ್ಸೆಡ್ ಡಿಪೋಸಿಟ್
ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.
7. ಇನ್ಸುರೆನ್ಸೆ ಪ್ರೀಮಿಯಂ ಪೇಮೆಂಟ್
ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.
8. ಆದಾಯ ತೆರಿಗೆ ಪಾವತಿಸಿ
ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.
9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ
ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ
ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.
11. ಖಾತೆ ವರ್ಗಾವಣೆ ಮಾಡಬಹುದು.
ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು. ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.
12.ಮೊಬೈಲ್ ಬ್ಯಾಂಕಿಂಗ್ ನೋಂದಣಿ
ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.
13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ
ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.
14. ರೈಲ್ವೆ ಟಿಕೆಟ್ ಬುಕಿಂಗ್ ಮಾಡಿ
ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.
15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು
ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…