ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ