ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…