ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!
1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000
2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.
3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.
4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.
5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ಈ 5 ತಪ್ಪುಗಳನ್ನು ಮಾಡಲೇಬೇಡಿ..!
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…