ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ
ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.
ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ. ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?
ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .
ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 % ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.
ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.
… ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…