ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.
ಧಾನ್ಯಗಳು:-
ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.

ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.
ಬಾದಾಮಿ:-
ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.

ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಸಳೆ:-

ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.
ನವಧಾನ್ಯಗಳು:-
ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.

ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.
ಬಾಳೆಹಣ್ಣು:-
ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.

ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಜೇನುತುಪ್ಪ:-
ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.

ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.
ಓಟ್ಸ್:-
ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.

ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.
ಸಿಹಿ ಗೆಣಸು:-
ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.

ಒಂದು ಗ್ಲಾಸ್ ಬೆಚ್ಚಗಿನ ಹಾಲು:-
ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.

ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.
ಡಾರ್ಕ್ ಚಾಕೋಲೇಟ್ಸ್:-

ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…