ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…