ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…