ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…