ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.