ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.