ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

4185

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…