ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.
ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.
ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.
ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !
ಕೃಪೆ:ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…