News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2164

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…