News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2162

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…