ಉಪಯುಕ್ತ ಮಾಹಿತಿ

ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

3452

ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.


ಈ ನೈಸರ್ಗಿಕ  ಹೂವುಗಳೇ  ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.

ಚೆಂಡು ಹೂವು:-

ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ಗುಲಾಬಿ ಅಗಾಪಂಥಸ್:-

ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.


ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-

ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-

ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಜೀವನಶೈಲಿ

    90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…