ಗ್ಯಾಜೆಟ್

ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

583

ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್‍ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್‌ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.

ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್‍ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ‌.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-

ಮೊದಲಿಗೆ ಆಧಾರ್ ವೆಬ್‌ಸೈಟ್‌ ಓಪನ್ ಮಾಡಿಕೊಳ್ಳಿ…

ನಂತರ ಆಧಾರ್ ಅಪ್ಡೇಟ್‌ ಆಯ್ಕೆಯನ್ನು ಮಾಡಿಕೊಳ್ಳಿ.

ವೆಬ್‌ಸೈಟ್‌ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.

ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…