News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2965

ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ.  ನೀವು ಇಡೀ ದಿನ ಸಂತೋಷವಾಗಿರುತ್ತೀರಿ.

ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.

ಬೆಳಿಗ್ಗೆ ಎದ್ದ ತಕ್ಷಣ  ಮೊಬೈಲ್ ನೋಡೊದ್ನ ಬಿಟ್ಬಿಡಿ :-

ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.

ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.

ಎದ್ದ ತಕ್ಷಣ  ಐದ್ ಹತ್ತು ನಿಮಿಷ ಧ್ಯಾನ ಮಾಡಿ :-

ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.

ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.

ನಿಮ್ಮ ಇಡೀ  ದಿನ ಹೇಗಿರ್ಬೇಕು ಅಂತ ಮನ್ಸಲ್ಲೇ ಕಲ್ಪನೆ ಮಾಡ್ಕೊಳಿ :-

ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.

ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.

ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.

ಏನಾದ್ರೂ ಬಿಸಿ ಬಿಸಿಯಾಗಿರೋದ್ನ ಕುಡಿಯೋ ಅಭ್ಯಾಸ ಇಟ್ಕೊಳಿ :-

ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು.  ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.

ಹಾಸಿಗೆ ಇಂದ ಎಳೋವಾಗ ಬಲಗಡೆ ಮೊಗ್ಗಲಲ್ಲಿ ಎದ್ದು ನೆಟ್ಟಗಿ ನಿಲ್ಲಿ :-

ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.

ಬೆಳಿಗ್ಗಿನ ತಿಂಡಿ ತಿನ್ನುವದನ್ನು ಮರೆಯಬೇಡಿ :-

ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.

ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು  ಶುರು ಹಚ್ಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…