ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..
ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು, ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.
ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.
ಕಿತ್ತಳೆ ಹಣ್ಣು
ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.
ಕ್ಯಾರೆಟ್
ಕ್ಯಾರೆಟ್ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಪಾಲಕ್ ಸೊಪ್ಪು
ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.
ದಾಳಿಂಬೆ ಹಣ್ಣು
ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬ್ರೋಕೋಲಿ
ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.
ಬೆರ್ರಿ ಹಣ್ಣುಗಳು
ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…