ಆರೋಗ್ಯ

ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

215

ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಆರೋಗ್ಯ ಸಮಸ್ಯೆಗಳು..

ಹೃದಯದ ಮೇಲೆ ಪರಿಣಾಮ :-

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್‌ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಗ್ಯಾಸ್ಟ್ರಿಕ್ ತೊಂದರೆಗಳು:-

ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಮಧುಮೇಹದ ಹೆಚ್ಚಿನ ಅಪಾಯ:-

ಬ್ರೇಕ್‌ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್‌ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ತಲೆಗೂದಲು ನಷ್ಟವಾಗಬಹುದು:-

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್‌ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್‌ಭರಿತ ಬ್ರೇಕ್‌ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಬೊಜ್ಜು ಹೆಚ್ಚುತ್ತದೆ:-

ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್‌ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ:-

ಬ್ರೇಕ್‌ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…