ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?
ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.
ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.
ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…