ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.ಊಟಕ್ಕೆ, ಶಾಪಿಂಗ್ಗೆ, ಪಾರ್ಟಿಗೆ, ಅಥವಾ ಕಾರಣವೇ ಇಲ್ಲದೇ ಸುಮ್ಮನೇ ಸೆಲ್ಫಿ ಜೊತೆಗಿರಬೇಕು.
ಈಗ ಸೆಲ್ಫಿ ಫೋಟೋಗಳಿಗಾಗಿಯೇ ಹೊಸ ಹೊಸ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ಫೋನ್’ಗಳು ಬರುತ್ತಿವೆ.ಈ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು, ಎಷ್ಟು ರೋಮಾಂಚನವಾಗಿರುತ್ತೋ ಅಷ್ಟೇ ಭಯಾನಕತೆಯೂ ಇದೆ.ಈ ಸೆಲ್ಫಿ ಹುಚ್ಚಿನಿಂದಾಗಿ ವಿಶ್ವದಾದ್ಯಂತ ಸಾವಿರಾರು ಜನರು ಸಾವನಪ್ಪಿದ್ದಾರೆ.ಅಂಕಿ ಅಂಶಗಳ ಪ್ರಕಾರ ಶೇಕಡಾ 60ರಷ್ಟು ಪಾಲು ಭಾರತದಲ್ಲಿದೆ.
ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ರೋಗ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಶಾಲೆಯಲ್ಲಿ ಈ ಅಧ್ಯಯನ ಮಾಡಿದ್ದಾರೆ.ಅವಶ್ಯಕತೆಗಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರುತ್ತಿರುವ ಶಬ್ಧ. ಆದರೆ ಇವಾಗ ವೈದ್ಯರು ಇದಕ್ಕೆ ಮಾನಸಿಕ ರೋಗದ ರೂಪ ಕೊಟ್ಟಿದ್ದಾರೆ.
ಸಂಶೋಧನಕಾರರು ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದ್ದಾರೆ. ಇದರಲ್ಲಿ ಮೂರು ಹಂತವಿರುತ್ತದೆ. ಪ್ರಾರಂಭದಲ್ಲಿ ಈ ರೋಗಿಗಳು ದಿನಕ್ಕೆ ಮೂರು ಸಲ ಮಾತ್ರ ಫೋಟೋ ತೆಗೆದುಕೊಳ್ಳುತ್ತಾರೆ.ಆದರೆ ಸಾರ್ವಜನಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾರ್ವಜನಿಕ ಜಾಲತಾಣಕ್ಕೆ ಫೋಟೋ ಹಾಕುವ ಚಟ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹೇಳುತ್ತದೆ . ಈ ಕ್ರಿಯೆ ತುಂಬಾ ಜಾಸ್ತಿ ಆದಲ್ಲಿ ಅದನ್ನು ಕೊನೆಯ ಹಂತವೆಂದು ಹೇಳಬಹುದು.
ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣಗಳನ್ನು ಹಲವಾರು ದೇಶಗಳು ಗಹನವಾಗಿ ತೆಗೆದುಕೊಂಡಿವೆ. ಇದರ ವಿಚಾರವಾಗಿ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಆದರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣವನ್ನು ಕಂಡುಇಡಿಯಲು ಆಗುತ್ತಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ. ದೃಢ ನಿರ್ಧಾರ ಮಾಡಿದಲ್ಲಿ ಈ ರೋಗದಿಂದ ಸುಲಭವಾಗಿ ಹೊರಗೆ ಬರಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…