ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…