ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ ದಲ್ಲದೆ ಪಕ್ಷದ ಮರ್ಯಾದೆಯನ್ನು ಬೀದಿಪಾಲು ಮಾಡಿದ್ದಾರೆ.
ಉತ್ತರ ಪ್ರದೇಶದ ಸಂತ ಕಬೀರ ನಗರ ಕ್ಷೇತ್ರದ ಸಂಸದ ಶರದ್ ತ್ರಿಪಾಠಿ ಹಾಗೂ ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದ ಮೇಲ್ವಿಚಾರಣೆ ಹಾಗೂ ನಿಗಾ ಸಮಿತಿ ಸಭೆಯಲ್ಲಿ ಈ ಘಟನೆ ನಡೆದಿದೆ.

ಸಂತ ಕಬೀರ ನಗರದ ರಸ್ತೆಯೊಂದರ ಉದ್ಘಾಟನೆ ವೇಳೆ ತಮ್ಮ ಹೆಸರು ಏಕೆ ಇಲ್ಲ ಎಂದು ಸಂಸದ ಶರತ್ ಕೃ ಪಾರ್ಟಿ ಕೇಳಿದಾಗ ಸ್ಥಳೀಯ ಶಾಸಕರು ತಮ್ಮ ಇಷ್ಟ ಎಂದು ಹೇಳಿದ್ದಾರೆ. ಈ ಮಾತಿಗೆ ಮಾತು ಮುಂದುವರೆದು ಇಬ್ಬರ ನಡುವೆ ಜಗಳ ಆರಂಭವಾಗಿ ಕೊನೆಗೆ ಅದು ಅವಾಚ್ಯ ಶಬ್ದಗಳ ಬಳಕೆಗೆ ಕಾರಣವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮೊದಲು ಸಂಸದ ಶರತ್ ತ್ರಿಪಾಠಿ , ಶಾಸಕ ರಾಕೇಶ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಕೇಶ್ ಕೂಡ ಸಂಸದನಿಗೇ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಲವು ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ ನಂತರ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ಘಟನೆ ಕೇವಲ ಅವರಿಬ್ಬರ ಘನತೆಗೆ ಧಕ್ಕೆ ತರುವುದಲ್ಲ ದೆ ಇಡೀ ಪಕ್ಷವೇ ತಲೆತಗ್ಗಿಸುವಂತೆ ಮಾಡಿದೆ.ಜನಪ್ರತಿನಿಧಿಗಳು ಯಾವಾಗಲೂ ವರ್ತನೆಯಲ್ಲಿ ನಡೆ ನುಡಿಯಲ್ಲಿ ಜನತೆಗೆ ಸ್ಪೂರ್ತಿ ಆಗಿರಬೇಕು. ಅವರು ತಾವು ತಮ್ಮ ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿದ್ದೇನೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸಾರ್ವಜನಿಕವಾಗಿ ವರ್ತಿಸಬೇಕು. ಇದೆಲ್ಲಾ ಮರೆತು ಈ ರೀತಿ ಜನಪ್ರತಿನಿಧಿಗಳೇ ವರ್ತಿಸುವಾಗ ಜನರು ತಾವು ಅಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ವಿಮರ್ಶಿಸಿ ಕೊಳ್ಳಬೇಕಾಗಿದೆ.
ಇನ್ನು ಮುಂದಾದರೂ ಒಳ್ಳೆಯ ಜನಪ್ರತಿನಿಧಿಯನ್ನು ಆರಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ. ಪಕ್ಷ ಯಾವುದೇ ಇರಲಿ ಸಮಾಜದಲ್ಲಿ ಉತ್ತಮ ಗೌರವ ಸನ್ನಡತೆ ಉಳ್ಳ ವ್ಯಕ್ತಿಯನ್ನು ಜನರು ತಮ್ಮ ಪ್ರತಿನಿಧಿಯನ್ನಾಗಿ ಆರಿಸುವಂತಹ ಅನಿವಾರ್ಯತೆ ಈಗ ಎದುರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…