ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…