ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…