ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….