ಉಪಯುಕ್ತ ಮಾಹಿತಿ

ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

266

ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.

ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.

ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.

ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ  ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.

ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು

 ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್‍ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.

ಹಾರಾಡುವುದಿಲ್ಲ

ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ  ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.


ದೇವಾಲಯದ ರಚನೆ

ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ

ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.