ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…