ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…