News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

269

ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.

ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.

ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.

ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ  ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.

ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು

 ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್‍ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.

ಹಾರಾಡುವುದಿಲ್ಲ

ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ  ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.


ದೇವಾಲಯದ ರಚನೆ

ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ

ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…