ಆಧ್ಯಾತ್ಮ

ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

1375

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು,  ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ  ತೆಂಗಿನ ಕಾಯಿಗೆ ವಿಶೇಷವಾದ  ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.

ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.

ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.

ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ  ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…