ಆಧ್ಯಾತ್ಮ

ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

1374

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು,  ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ  ತೆಂಗಿನ ಕಾಯಿಗೆ ವಿಶೇಷವಾದ  ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.

ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.

ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.

ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ  ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

    ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಯನ್ನು ನೆನೆಯುತ್ತಾ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…