News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

2460

ಈಗ ಎಲ್ಲಾ ಕಡೆ  ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ  ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-


1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.

ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?

  • ಮೊದಲಿಗೆ ಭಾರತ ಒಂದು ಒಕ್ಕೂಟ
  • ಹಲವು ರಾಜ್ಯಗಳಿಂದ ಭಾರತ ಒಕ್ಕೂಟವಾಗಿದ್ದು ರಾಜ್ಯ ಸರಕಾರಗಳಿಗೆ  ಅದರದ್ದೇ  ಆದ ಅಧಿಕಾರಗಳು ಇರುತ್ತವೆ.
  • ಭಾರತದ ಸಂವಿಧಾನದಲ್ಲಾಗಲಿ (flag code of India) ನಲ್ಲಾಗಲಿ ರಾಜ್ಯಗಳು ತಮ್ಮ ಧ್ವಜವನ್ನು ಹೊಂದಬಾರದು ಎಂದು ಹೇಳಿಲ್ಲ.
  • Flag code of India ಪ್ರಕಾರ ಭಾರತದ ತ್ರಿವರ್ಣ ಧ್ವಜಕ್ಕೆ ಮೊದಲ ಸ‌್ಥಾನ, ಅಂದರೆ ಭಾರತ ಒಕ್ಕೂಟದ ಧ್ವಜ ಬೇರೆಲ್ಲಾ ಧ್ವಜಗಳಿಗಿಂತಲೂ ಮೇಲೆ ಹಾರಾಡಬೇಕಿದೆ.
  • ಕರ್ನಾಟಕ ಸರಕಾರ ತನ್ನ ಧ್ವಜವನ್ನು ಹೊಂದಲು ಸಂಪೂರ್ಣ ಸ್ವತಂತ್ರವಿದೆ.
  • ಪ್ರಪಂಚದಲ್ಲಿ ಅನೇಕ ಒಕ್ಕೂಟಗಳಲ್ಲಿ ರಾಜ್ಯಗಳು ತಮ್ಮದೇ ಧ್ವಜವನ್ನು ಹೊಂದಿವೆ.
  • . ರಾಜ್ಯ ತನ್ನದೇ ಧ್ವಜ ಹೊಂದಿದ ಮಾತ್ರಕ್ಕೆ ಏಕತೆಗೆ ಧಕ್ಕೆ ಅನ್ನುವುದರಲ್ಲಿ ಹುರುಳಿಲ್ಲ.
  •  ಅಮೇರಿಕದ 50 ರಾಜ್ಯಗಳಲ್ಲಿ ತಮ್ಮದೇ ಆದ ಧ್ವಜ ಹೊಂದಿದೆ.
  •  ಬ್ರೆಸಿಲ್ ನ 27 ರಾಜ್ಯಗಳು ತಮ್ಮದೇ ಆದ ಧ್ಬಜ ಹೊಂದಿವೆ
  •  ಆಸ್ಟ್ರೇಲಿಯಾದ 8 ಕ್ಕೂ ಹೆಚ್ಚು ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿವೆ
  •  ಜರ್ಮನಿಯ ಸುಮಾರು 16 ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿದೆ.

ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…