ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1920

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸೌಂದರ್ಯ

    ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…