ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.
ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)
ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.
ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.
ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…