News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

435

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್‍ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್‍ವುಳ್ಳ ಬಟ್ಟೆ ಸಿಗಬಹುದು.

2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್‍ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್‍ಗಳ ಜೀನ್ಸ್ ಮತ್ತು ಟಾಪ್‍ಗಳ ಸೈಜ್‍ನಲ್ಲಿ ವ್ಯತ್ಯಾಸವಿರುತ್ತದೆ.

3.ಒಂದೇ ಡಿಸೈನ್‍ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್‍ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್‍ಗಳು ಇರುವಾಗ ಒಂದೇ ಡಿಸೈನ್‍ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್‍ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್‍ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್‍ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…